ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಮರನಾಥ ಯಾತ್ರೆಯನ್ನು ದೇಶದ ಆಧ್ಯಾತ್ಮಿಕ ಪ್ರವಾಸೋದ್ಯಮಕ್ಕೆ ಮಾದರಿಯನ್ನಾಗಿ ರೂಪಿಸುವಂತೆ ಕರೆ ನೀಡಿದ್ದಾರೆ.

ಅಮರನಾಥ ಯಾತ್ರೆ ಭಾರತದ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಈ ವರ್ಷದ ಯಾತ್ರೆಯನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಗಳು ಮತ್ತು ಸಂಬಂಧಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.

Untitled design (40)

ಅಮರನಾಥ ಯಾತ್ರೆಯು ಕೇವಲ ಧಾರ್ಮಿಕ ಆಚರಣೆಯಲ್ಲ, ಅದು ದೇಶದ ಆಧ್ಯಾತ್ಮಿಕ ಪ್ರವಾಸೋದ್ಯಮದ ಬೆಳವಣಿಗೆಗೆ ದಾರಿದೀಪವಾಗುವ ಸಾಮರ್ಥ್ಯ ಹೊಂದಿದೆ. ಯಾತ್ರೆಯ ನಿರ್ವಹಣೆ, ಭದ್ರತೆ, ಮೂಲಸೌಕರ್ಯ, ಸ್ವಚ್ಛತೆ ಹಾಗೂ ಯಾತ್ರಿಕರಿಗೆ ನೀಡುವ ಸೇವೆಗಳಲ್ಲಿ ಉನ್ನತ ಗುಣಮಟ್ಟವನ್ನು ಕಾಯ್ದುಕೊಂಡರೆ, ಇದೇ ಮಾದರಿಯನ್ನು ದೇಶದ ಇತರ ಪ್ರಮುಖ ತೀರ್ಥಕ್ಷೇತ್ರಗಳಲ್ಲಿಯೂ ಅನುಸರಿಸಬಹುದು ಎಂದಿದ್ದಾರೆ.

ಯಾತ್ರಿಕರಿಗೆ ಸುರಕ್ಷಿತ ಹಾಗೂ ಸುಗಮ ಅನುಭವ ಒದಗಿಸುವುದು ಆಡಳಿತದ ಪ್ರಮುಖ ಆದ್ಯತೆಯಾಗಿದ್ದು, ಸರಕಾರ, ಭದ್ರತಾ ಪಡೆಗಳು, ಸ್ವಯಂಸೇವಕರು ಹಾಗೂ ಸ್ಥಳೀಯ ಸಮುದಾಯದ ಸಹಕಾರದಿಂದ ಅಮರನಾಥ ಯಾತ್ರೆಯನ್ನು ವಿಶ್ವಮಟ್ಟದ ಆಧ್ಯಾತ್ಮಿಕ ಪ್ರವಾಸೋದ್ಯಮದ ಮಾದರಿಯನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.