ಬಂಡೀಪುರ ಸಫಾರಿ ಬಂದ್: ಪ್ರವಾಸೋದ್ಯಮ ಅವಲಂಬಿತರ ಜೀವನ ಸ್ತಬ್ಧ
ಸ್ಥಳೀಯ ಹೊಟೇಲ್ಗಳು, ಹೋಂ-ಸ್ಟೇಗಳು, ಊಟದ ಅಂಗಡಿಗಳು, ಚಿಲ್ಲರೆ ವ್ಯಾಪಾರಿಗಳು ಮತ್ತು ಟೂರಿಸ್ಟ್ ಗೈಡ್ಗಳಲ್ಲಿ ಬಹುತೇಕರು ಸಫಾರಿಗೆ ಬರುತ್ತಿರುವವರ ಮೇಲೆಯೇ ಸಂಪೂರ್ಣ ಅವಲಂಬಿತರಾಗಿದ್ದರು. ಸಫಾರಿ ಬಂದ್ ಆದ ನಂತರ ಪ್ರವಾಸಿಗರ ಸಂಖ್ಯೆ ತೀವ್ರವಾಗಿ ಕುಸಿದಿದ್ದು, ಇವರೆಲ್ಲರೂ ಆದಾಯವಿಲ್ಲದೆ ಆರ್ಥಿಕ ಒತ್ತಡವನ್ನು ಎದುರಿಸುತ್ತಿದ್ದಾರೆ. ಅನೇಕರು ತಮ್ಮ ದಿನನಿತ್ಯದ ಖರ್ಚು, ಮಕ್ಕಳ ಶಿಕ್ಷಣ ಹಾಗೂ ಮನೆಯ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಹೋರಾಟ ನಡೆಸುತ್ತಿದ್ದಾರೆ.
ಬಂಡೀಪುರ ಟೈಗರ್ ರಿಸರ್ವ್ನಲ್ಲಿ ಸಫಾರಿ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪ್ರವಾಸೋದ್ಯಮದ ಮೇಲೆ ಭಾರೀ ಹೊಡೆತ ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಸಫಾರಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದ್ದು, ಇದರಿಂದಾಗಿ ಗುಂಡ್ಲುಪೇಟೆ ಹಾಗೂ ಸುತ್ತಮುತ್ತಲಿನ ಪ್ರವಾಸೋದ್ಯಮಾಧಾರಿತ ಕುಟುಂಬಗಳು ಸಂಕಷ್ಟವನ್ನು ಎದುರಿಸುವಂತಾಗಿದೆ.

ಸ್ಥಳೀಯ ಹೊಟೇಲ್ಗಳು, ಹೋಂ-ಸ್ಟೇಗಳು, ಊಟದ ಅಂಗಡಿಗಳು, ಚಿಲ್ಲರೆ ವ್ಯಾಪಾರಿಗಳು ಮತ್ತು ಟೂರಿಸ್ಟ್ ಗೈಡ್ಗಳಲ್ಲಿ ಬಹುತೇಕರು ಸಫಾರಿಗೆ ಬರುತ್ತಿರುವವರ ಮೇಲೆಯೇ ಸಂಪೂರ್ಣ ಅವಲಂಬಿತರಾಗಿದ್ದರು. ಸಫಾರಿ ಬಂದ್ ಆದ ನಂತರ ಪ್ರವಾಸಿಗರ ಸಂಖ್ಯೆ ತೀವ್ರವಾಗಿ ಕುಸಿದಿದ್ದು, ಇವರೆಲ್ಲರೂ ಆದಾಯವಿಲ್ಲದೆ ಆರ್ಥಿಕ ಒತ್ತಡವನ್ನು ಎದುರಿಸುತ್ತಿದ್ದಾರೆ. ಅನೇಕರು ತಮ್ಮ ದಿನನಿತ್ಯದ ಖರ್ಚು, ಮಕ್ಕಳ ಶಿಕ್ಷಣ ಹಾಗೂ ಮನೆಯ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಹೋರಾಟ ನಡೆಸುತ್ತಿದ್ದಾರೆ.
ಜನರ ಸುರಕ್ಷತೆ ಹಾಗೂ ವನ್ಯಜೀವಿ ಸಂರಕ್ಷಣೆಗಾಗಿ ಸಫಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಅರಣ್ಯ ಇಲಾಖೆಯ ಈ ನಿರ್ಧಾರ ಪ್ರವಾಸೋದ್ಯಮ ಕ್ಷೇತ್ರದ ಮೇಲೆಯೇ ಅವಲಂಬಿತರಾಗಿದ್ದ ಹಲವರ ಜೀವನವನ್ನು ಸ್ತಬ್ಧವಾಗಿಸಿದೆ.
ಪ್ರವಾಸೋದ್ಯಮ ಕ್ಷೇತ್ರದ ಅನೇಕ ಸಂಘಟನೆಗಳು ಸರ್ಕಾರಕ್ಕೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿವೆ.