Thursday, February 12, 2026
Thursday, February 12, 2026

ಭಾರತ–ಭೂತಾನ್ ಪ್ರವಾಸೋದ್ಯಮವನ್ನು ಗಟ್ಟಿಗೊಳಿಸಲು ಬಿಟಿಸಿ ಕಾನ್ಕ್ಲೇವ್

ಸಭೆಯಲ್ಲಿ, ಭಾರತ–ಭೂತಾನ್ ಗಡಿ ಪ್ರದೇಶಗಳಲ್ಲಿ ವ್ಯಾಪಾರ ಮತ್ತು ಪ್ರವಾಸೋದ್ಯಮಕ್ಕೆ ಇರುವ ಅವಕಾಶಗಳು, ಸವಾಲುಗಳು ಹಾಗೂ ಅವುಗಳ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಯಿತು. ಗಡಿ ವ್ಯಾಪಾರ ಸುಗಮಗೊಳಿಸುವಿಕೆ, ಮೂಲಸೌಕರ್ಯ ಅಭಿವೃದ್ಧಿ, ನಿಯಂತ್ರಣ ವ್ಯವಸ್ಥೆಗಳ ಸುಧಾರಣೆ ಹಾಗೂ ಭದ್ರತಾ ವಿಚಾರಗಳು ಪ್ರಮುಖ ಚರ್ಚಾ ವಿಷಯಗಳಾಗಿದ್ದವು.

ಭಾರತ ಮತ್ತು ಭೂತಾನ್ ನಡುವಿನ ವ್ಯಾಪಾರ ಹಾಗೂ ಪ್ರವಾಸೋದ್ಯಮ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೊಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ (BTC) ವತಿಯಿಂದ ವಿಶೇಷ ಕಾನ್ಕ್ಲೇವ್ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಅಸ್ಸಾಂನ ಚಿರಾಂಗ್ ಜಿಲ್ಲೆಯ ಶಾಂತಿಪುರದಲ್ಲಿ ನಡೆಯಿತು.

“ಉತ್ತಮ ಜೀವನ ನಿರ್ವಹಣೆಗಾಗಿ ವ್ಯಾಪಾರ ಮತ್ತು ಸಾಂಸ್ಕೃತಿಕ ಪ್ರವಾಸೋದ್ಯಮದ ಮೂಲಕ ಸ್ಥಳೀಯ ಸಮುದಾಯಗಳ ಸಬಲೀಕರಣ” ಎಂಬ ವಿಷಯದಡಿ ನಡೆದ ಈ ಕಾನ್ಕ್ಲೇವ್‌ನಲ್ಲಿ ಆಡಳಿತಾಧಿಕಾರಿಗಳು, ವ್ಯಾಪಾರ ಪ್ರತಿನಿಧಿಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ತಜ್ಞರು ಪಾಲ್ಗೊಂಡಿದ್ದರು.

ಸಭೆಯಲ್ಲಿ, ಭಾರತ–ಭೂತಾನ್ ಗಡಿ ಪ್ರದೇಶಗಳಲ್ಲಿ ವ್ಯಾಪಾರ ಮತ್ತು ಪ್ರವಾಸೋದ್ಯಮಕ್ಕೆ ಇರುವ ಅವಕಾಶಗಳು, ಸವಾಲುಗಳು ಹಾಗೂ ಅವುಗಳ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಯಿತು. ಗಡಿ ವ್ಯಾಪಾರ ಸುಗಮಗೊಳಿಸುವಿಕೆ, ಮೂಲಸೌಕರ್ಯ ಅಭಿವೃದ್ಧಿ, ನಿಯಂತ್ರಣ ವ್ಯವಸ್ಥೆಗಳ ಸುಧಾರಣೆ ಹಾಗೂ ಭದ್ರತಾ ವಿಚಾರಗಳು ಪ್ರಮುಖ ಚರ್ಚಾ ವಿಷಯಗಳಾಗಿದ್ದವು.

ಇದೇ ವೇಳೆ, ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮೂಲಕ ಸ್ಥಳೀಯ ಸಮುದಾಯಗಳಿಗೆ ಆರ್ಥಿಕ ಲಾಭ ಒದಗಿಸುವ ಸಾಧ್ಯತೆಗಳ ಕುರಿತು ಒತ್ತಾಯಿಸಲಾಯಿತು. ಈ ಕಾನ್ಕ್ಲೇವ್‌ ಭಾರತ–ಭೂತಾನ್ ನಡುವೆ ವ್ಯಾಪಾರ, ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಸಹಕಾರವನ್ನು ಇನ್ನಷ್ಟು ಗಟ್ಟಿಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಆಯೋಜಕರು ಅಭಿಪ್ರಾಯಪಟ್ಟರು.

Soumya

Soumya

I am Soumya Shindhe, an engineering graduate with a strong passion for literature and journalism. I have contributed interview articles to Chittara cine magazine and possess keen interest in writing, communication, and creative expression, aspiring to grow professionally.

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

Read Previous

ಮೇ 1 ರಿಂದ ವಿದೇಶಿ ಪ್ರವಾಸಿಗರಿಗೆ ಥಾಯ್ಲೆಂಡ್‌ನಲ್ಲಿ ಡಿಜಿಟಲ್ ಆಗಮನ ಕಾರ್ಡ್ ಕಡ್ಡಾಯ

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ

Read Next

ಬೇಸಿಗೆಯ ಪ್ರವಾಸಕ್ಕಿದು ಸೂಕ್ತ ಸಮಯ; ತೆರಳುವ ಮುನ್ನ ಪೊಲೀಸರ ಈ ಸಲಹೆಗಳನ್ನು ಪಾಲಿಸಿ