Tuesday, July 29, 2025
Tuesday, July 29, 2025

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಾಹನ ಸಂಚಾರ ನಿರ್ಬಂಧ

ಶ್ರಾವಣ ಮಾಸದ ಪ್ರಯುಕ್ತ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಇಂದು ಅಥವಾ ನಾಳೆ ಹೋಗಬೇಕೆಂದುಕೊಂಡಿದ್ದೀರಾ..? ಹಾಗಾದರೆ ಈ ಸುದ್ದಿ ನಿಮಗಾಗಿ. ಎರಡು ದಿನಗಳ ಕಾಲ ಬೆಟ್ಟಕ್ಕೆ ವಾಹನ ಸಂಚಾರ ನಿರ್ಬಂಧ ಹೇಳರಲಾಗಿದ್ದು, ತೆರಳುವ ಮುನ್ನ ಮತ್ತೊಮ್ಮೆ ಯೋಚಿಸಿ.

ಚಾಮರಾಜನಗರ : ಮಳೆ ಮತ್ತು ಮಂಜಿನ ನಡುವೆ ಪ್ರವಾಸಿಗರನ್ನು ಸೆಳೆಯುವ ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟ. ನಿತ್ಯವೂ ಇಲ್ಲಿಗೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು, ಪ್ರವಾಸಿಗರು ಭೇಟಿ ನೀಡುತ್ತಾರೆ. ವಿಶೇಷವಾಗಿ ಶ್ರಾವಣ ಮಾಸದ ಪ್ರಯುಕ್ತ ಬೆಟ್ಟಕ್ಕೆ ಭೇಟಿ ಕೊಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆದರೆ ಸದ್ಯ ಇಲ್ಲಿನ ತಡೆಗೋಡೆ ಕುಸಿತದ ಹಿನ್ನಲೆ ಇಂದು, ನಾಳೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

himavadgopalaswamy betta 3

ಗೋಪಾಲಸ್ವಾಮಿ ಬೆಟ್ಟದ ರಸ್ತೆ ಬದಿ ಪ್ಯಾರಾಪಿಟ್ ವಾಲ್ ಕುಸಿದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನ ದೇವಾಲಯವನ್ನ ಬಂದ್ ಮಾಡಲಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಅಲ್ಲದೆ ಬಿಳಿಗಿರಿರಂಗನ ಬೆಟ್ಟಕ್ಕೆ ಗುಡಿಗೆ ಹೋಗುವ ಹೊಂಡರಬಾಳು ಮಾರ್ಗವೂ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಬಂದ್ ಆಗಿದೆ. ಸೆಪ್ಟಂಬರ್ 27 ರವರೆಗೆ ಈ ಮಾರ್ಗವಾಗಿ ಬೆಟ್ಟಕ್ಕೆ ತೆರಳಲು ಸಾಧ್ಯವಿಲ್ಲವೆಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..