Thursday, August 6, 2026
Thursday, August 6, 2026

ಏರ್ ಇಂಡಿಯಾಗೆ ಹೊಸ ಸಿಇಒ

ಇಥಿಯೋಪಿಯನ್ ಏರ್‌ಲೈನ್ಸ್ ಮಾಜಿ ಮುಖ್ಯಸ್ಥ ಟೆವೊಲ್ಡೆ ಗೆಬ್ರೆಮರಿಯಂ ನೇಮಕ

ಟಾಟಾ ಸಮೂಹದ ಒಡೆತನದಲ್ಲಿರುವ ಏರ್ ಇಂಡಿಯಾ ಸಂಸ್ಥೆಯು ತನ್ನ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಇಥಿಯೋಪಿಯನ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥ ಟೆವೊಲ್ಡೆ ಗೆಬ್ರೆಮರಿಯಂ ಅವರನ್ನು ನೇಮಕ ಮಾಡಿದೆ. ಕ್ಯಾಂಪ್ಬೆಲ್ ವಿಲ್ಸನ್ ಅವರ ಸ್ಥಾನಕ್ಕೆ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಹೊಸ ಸಿಇಒಗಾಗಿ ನಡೆದ ಹುಡುಕಾಟಕ್ಕೆ ಈ ನೇಮಕದೊಂದಿಗೆ ತೆರೆ ಬಿದ್ದಿದೆ.

ಟೆವೊಲ್ಡೆ ಅವರಿಗೆ ವಿಮಾನಯಾನ ಕ್ಷೇತ್ರದಲ್ಲಿ 36 ವರ್ಷಕ್ಕೂ ಅಧಿಕ ಅನುಭವವಿದ್ದು, ಇಥಿಯೋಪಿಯನ್ ಏರ್‌ಲೈನ್ಸ್ ಅನ್ನು ಆಫ್ರಿಕದ ಅತಿದೊಡ್ಡ ಮತ್ತು ಅತ್ಯಂತ ಯಶಸ್ವಿ ವಿಮಾನ ಸಂಸ್ಥೆಯಾಗಿ ಬೆಳೆಸಿದ ಸಾಧನೆ ಅವರದ್ದಾಗಿದೆ. ಕೋವಿಡ್-19 ಸಾಂಕ್ರಾಮಿಕದಂಥ ಸಂಕಷ್ಟದ ಅವಧಿಯಲ್ಲೂ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಿದ ಅನುಭವವಿದೆ. ಏರ್ ಇಂಡಿಯಾ ಇತ್ತೀಚಿನ ಆರ್ಥಿಕ ನಷ್ಟ, ಕಾರ್ಯಾಚರಣಾ ಸವಾಲುಗಳು ಹಾಗೂ ನಿಯಂತ್ರಣ ಸಂಸ್ಥೆಗಳ ಮೇಲ್ವಿಚಾರಣೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ಪುನಶ್ಚೇತನಕ್ಕೆ ಅವರ ನಾಯಕತ್ವ ಮಹತ್ವದ್ದಾಗಲಿದೆ ಎಂದು ಟಾಟಾ ಸಮೂಹ ವಿಶ್ವಾಸ ವ್ಯಕ್ತಪಡಿಸಿದೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..