Monday, August 18, 2025
Monday, August 18, 2025

ಸಂರಕ್ಷಣಾ ಮೀಸಲು ಪ್ರದೇಶವಾಗಲಿದ್ಯಾ ನೀಲಿಕುರುಂಜಿಯ ತಾಣ ?

ಪ್ರತಿ 12 ವರ್ಷಗಳಿಗೊಮ್ಮೆ ಅರಳುವ ಅಪರೂಪದ ನೀಲಿಕುರುಂಜಿ ಹೂವುಗಳನ್ನು ನೋಡುವುದು ಕಣ್ಣಿಗೆ ಹಬ್ಬವೇ ಸರಿ. ಈ ಸುಂದರ ನೋಟವನ್ನು ಕಣ್ತುಂಬಿಕೊಳ್ಳುವ ಸಲುವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಅಲ್ಲಿಗೆ ಹೋಗುತ್ತಿದ್ದಾರೆ. ಇಂಥ ವಿಶೇಷತೆಯುಳ್ಳ ತಾಣವನ್ನು ಸಂರಕ್ಷಣಾ ಮೀಸಲು ಪ್ರದೇಶವೆಂದು ಘೋಷಿಸುವಂತೆ ಕರ್ನಾಟಕ ಅರಣ್ಯ ಇಲಾಖೆಯು ಕಂದಾಯ ಇಲಾಖೆಯನ್ನು ಒತ್ತಾಯಿಸಿದೆ.

ಬೆಂಗಳೂರು: ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯ ಸೌಂದರ್ಯವನ್ನು ಹೆಚ್ಚಿಸಿದ ನೀಲಿಕುರುಂಜಿ ಹೂಗಳ ತಾಣವನ್ನು ಸಂರಕ್ಷಣಾ ಮೀಸಲು ಪ್ರದೇಶವೆಂದು ಘೋಷಿಸುವಂತೆ ಕರ್ನಾಟಕ ಅರಣ್ಯ ಇಲಾಖೆಯು ಕಂದಾಯ ಇಲಾಖೆಯನ್ನು ಒತ್ತಾಯಿಸಿದೆ. ಮುಳ್ಳಯ್ಯನಗಿರಿಯಲ್ಲಿ ನೀಲಿಕುರುಂಜಿ ಹೂಗಳು ಅರಳುವ ಪ್ರದೇಶ 2020 ರಲ್ಲಿ 16,000 ಎಕರೆಗಳಷ್ಟಿತ್ತು. ಈ ನಡುವೆ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಸಂರಕ್ಷಣಾ ಮೀಸಲು ಪ್ರದೇಶ ಘೋಷಿಸುವ ಪ್ರಸ್ತಾವನೆ ಮುಂದಿಟ್ಟಾಗ ಮರು ಪರಿಶೀಲನೆ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು.

ಪರಿಶೀಲನೆ ವೇಳೆ ಈ ಪ್ರದೇಶವನ್ನು 9,000 ಎಕರೆಗಳಿಗೆ ಇಳಿಸಲಾಗಿತ್ತು. ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು ಈ ಪ್ರದೇಶವನ್ನು ಸಂರಕ್ಷಣಾ ಮೀಸಲು ಪ್ರದೇಶವೆಂದು ಘೋಷಿಸುವ ಕಲ್ಪನೆಯನ್ನು ಅನುಮೋದಿಸಿದ ನಂತರ, ಎರಡು ತಿಂಗಳ ಹಿಂದೆ ಕಂದಾಯ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ವನ್ಯಜೀವಿಗಳ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿಸಿ ರೈ ಹೇಳಿದ್ದಾರೆ.

neelakurunji

ಜಿಲ್ಲಾಡಳಿತದಿಂದ ಭೂ ವರದಿಯನ್ನು ಕೋರಲಾಗಿದ್ದು, ಮರು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅವರು ತಿಳಿಸಿದ್ದಾರೆ.

ನೀಲಿಕುರುಂಜಿ ಪ್ರಭೇದಗಳನ್ನು ರಕ್ಷಿಸುವ ಮತ್ತು ಅಂತರರಾಷ್ಟ್ರೀಯ ಪ್ರಕೃತಿ ಸಂರಕ್ಷಣಾ ಒಕ್ಕೂಟ (IUCN) ನಿಂದ ಅವುಗಳನ್ನು ರಕ್ಷಿಸಲಾಗಿದೆ ಎಂದು ಘೋಷಿಸುವ ಕುರಿತು ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದು, ಇದರ ಮೇಲೆ ಅರಣ್ಯ ಇಲಾಖೆ ಭರವಸೆ ಇಟ್ಟಿದೆ. ಎಲ್ಲಾ ನೀಲಿಕುರುಂಜಿ ಪ್ರಭೇದಗಳನ್ನು IUCN ಎಂದು ಘೋಷಿಸಿದರೆ, ನೀಲಗಿರಿ ಮಾತ್ರವಲ್ಲ, ಪಶ್ಚಿಮ ಘಟ್ಟಗಳ ಎಲ್ಲಾ ಭಾಗಗಳನ್ನು ಕೂಡ ರಕ್ಷಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..