Sunday, January 11, 2026
Sunday, January 11, 2026

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಆರ್‌ಜಡ್ ಕಾನೂನು ಸರಳೀಕರಣ: ಡಿ.ಕೆ.ಶಿವಕುಮಾರ್‌

ಮಂಗಳೂರಿನಲ್ಲಿ ನಡೆದ 'ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026' ರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ. ಕರಾವಳಿಯು ಆರೋಗ್ಯ ಕ್ಷೇತ್ರ, ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಪ್ರದೇಶವಾಗಿದೆ. ಉದ್ಯಮಿಗಳು ಸೇರಿ ಅನೇಕರ ಸಲಹೆ ಸೂಚನೆಗಳನ್ನು ‌ಸಹ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

"ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿಆರ್‌ಜಡ್) ಕಾನೂನು ಸರಳೀಕರಣ ಮಾಡಲಾಗುವುದು. ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸಲಾಗುವುದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಗಳೂರಿನಲ್ಲಿ ಶನಿವಾರ ನಡೆದ 'ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026' ರಲ್ಲಿ ಡಿಸಿಎಂ ಮಾತನಾಡಿದರು.

"ಮುಖ್ಯಮಂತ್ರಿಯವರ ಸಮ್ಮುಖದಲ್ಲಿ ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಇತರೇ ಸಂಬಂಧಪಟ್ಟವರ ಜೊತೆ ಸಿಆರ್‌ಜಡ್ ವಿಚಾರ ಚರ್ಚೆ ನಡೆಸಲಾಗಿದೆ. ಇಲ್ಲಿನ ಸಂಸದರಿಗೂ ಇದರ ಬಗ್ಗೆ ತಿಳಿಸಲಾಗಿದೆ. ಉದ್ಯಮಿಗಳು ಸೇರಿದಂತೆ ಅನೇಕರ ಸಲಹೆ ಸೂಚನೆಗಳನ್ನು ‌ಸಹ ಪಡೆಯಲಾಗಿದೆ" ಎಂದರು.

"ಮೂರು ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ ನೋಡಲ್ ಅಧಿಕಾರಿ ಸೇರಿದಂತೆ, ಏಕಗವಾಕ್ಷಿ ಏಜೆನ್ಸಿ ಪ್ರಾರಂಭ ಮಾಡಲಾಗುವುದು. ಯಾವುದೇ ವಿಚಾರವಿದ್ದರೂ ನನಗೆ ಪತ್ರದ ಮುಖೇನ ಅಥವಾ ಈ ಮೇಲ್ ಮೂಲಕ ತಿಳಿಸಿ" ಎಂದರು.

dk shivakumar 1

ಕರಾವಳಿ ಶಾಂತಿಯ ತೋಟವಾಗಿ ಉಳಿಯಬೇಕು

"ಕರಾವಳಿ ಸದಾ ಶಾಂತಿಯ ತೋಟವಾಗಿ ಉಳಿಯಬೇಕು ಎಂಬುದೇ ನಮ್ಮ ಸರ್ಕಾರದ ಚಿಂತನೆ. ಶಾಂತಿ ಸಾಮರಸ್ಯ ಉಳಿಯಬೇಕು ಎಂದರೆ ಯುವಕರಿಗೆ ಉದ್ಯೋಗ ದೊರೆಯಬೇಕು. ಇಲ್ಲಿ ಹುಟ್ಟಿ ಬೆಳೆದವರು ಹೊರಗೆ ಸಾಕಷ್ಟು ಸಾಧನೆ ಮಾಡಿದ್ದಾರೆ. ಅವರು ಮತ್ತೆ ಬಂದು ತಾವು ಹುಟ್ಟಿದ ಊರಿಗೆ ಕೊಡುಗೆ ನೀಡಬೇಕು. ಯಾರೇ ಇಲ್ಲಿಗೆ ಬಂದರು ಅವರು ಶಾಂತಿಯಿಂದ ವ್ಯವಹಾರ ನಡೆಸುವಂತಾಗಬೇಕು" ಎಂದು ಹೇಳಿದರು.

"ಈ ಹಿಂದೆ ಉಡುಪಿಯ ಒಂದು ಶಿಕ್ಷಣ ಸಂಸ್ಥೆಯಲ್ಲಿ ಗಲಾಟೆ ನಡೆದಾಗ ಅನೇಕ ಶಿಕ್ಷಣ ಸಂಸ್ಥೆಯವರು ಬಂದು ನಮ್ಮಲ್ಲಿ ದಾಖಲಾತಿ ಕಡಿಮೆಯಾಗಿದೆ ಎಂದು ಅಲವತ್ತುಕೊಂಡಿದ್ದರು. ನನಗೆ ಆಶ್ಚರ್ಯಗೊಳಿಸಿದ ಇನ್ನೊಂದು ಸಂಗತಿ ಎಂದರೆ ಸುಮಾರು 87 ಸಾವಿರ ಪಿಯು ವಿದ್ಯಾರ್ಥಿಗಳು ಹೊರಗಡೆಯಿಂದ ಬಂದು ಈ ಎರಡು ಜಿಲ್ಲೆಗಳಿಂದ ತಯಾರಾಗುತ್ತಿದ್ದಾರೆ. ಇಲ್ಲಿನ ವಿದ್ಯಾಸಂಸ್ಥೆಗಳು ಶಿಸ್ತು, ಸಂಸ್ಕೃತಿ ಕಲಿಸುತ್ತಿವೆ" ಎಂದರು.

"ತೆರಿಗೆ ಸೇರಿದಂತೆ ಯಾವ ವಿಚಾರವಾಗಿ ರಾಜ್ಯ ಸರ್ಕಾರ ಸಹಾಯ ಮಾಡಬಹುದು ಎಂದು ಉದ್ಯಮಿಗಳು ಸಲಹೆ ನೀಡಬಹುದು. ಪ್ರವಾಸೋದ್ಯಮ, ಆರೋಗ್ಯ ಪ್ರವಾಸೋದ್ಯಮ ಸೇರಿದಂತೆ ಇನ್ಯಾವುದೇ ವಿಚಾರ ಇದ್ದರೂ ನಮ್ಮ ಸರ್ಕಾರ ಸಹಕಾರ ನೀಡುವುದು" ಎಂದರು.

ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಪ್ರದೇಶ ಕರಾವಳಿ

"ಇಡೀ ದೇಶದಲ್ಲಿಯೇ ಅತ್ಯಂತ ಹೆಚ್ಚು ಬ್ಯಾಂಕ್‌ಗಳನ್ನು ನೀಡಿದ ನೆಲ ಕರಾವಳಿ. ಅವಿಭಜಿತ ಜಿಲ್ಲೆಯಲ್ಲಿ 8 ಮೆಡಿಕಲ್ ಕಾಲೇಜು ಹೊಂದಿರುವುದೇ ಹೆಗ್ಗಳಿಕೆ. ಆರೋಗ್ಯ, ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದ ಪ್ರದೇಶ ಕರಾವಳಿ.‌ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವುದಕ್ಕೆ ಮೊದಲು ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹೇಳಿದರು.

"ವಿಮಾನ ನಿಲ್ದಾಣ, ಬಂದರು ಸೇರಿದಂತೆ ಅನೇಕ ಅನುಕೂಲ ಇದ್ದರು ಒಂದಷ್ಟು ವಿಚಾರದಲ್ಲಿ ಕೊರತೆ ಕಂಡು ಬರುತ್ತಿದೆ. ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಮಾಡಿದ ಐಟಿ ನೀತಿ ಬೆಂಗಳೂರಲ್ಲಿ ಯಶಸ್ವಿಯಾಯಿತು. ಆದರೆ ಮಂಗಳೂರಿನಲ್ಲಿ ಆಗಲಿಲ್ಲ. ಇನ್ಫೋಸಿಸ್ ಸೇರಿದಂತೆ ಅನೇಕ ಕಂಪನಿಗಳು ಬಂದವು, ಆದರೆ ಕಾಲಕಳೆದಂತೆ ಕ್ಷೀಣಿಸುತ್ತಾ ಹೋಯಿತು.‌ ಇಲ್ಲಿನ ಯುವಕರು ಬೆಂಗಳೂರು, ಮುಂಬೈ, ದುಬೈನಲ್ಲಿ ಕೆಲಸ ಮಾಡುವಂತಾಗಿದೆ" ಎಂದರು‌.

"ಮುಂಬೈ, ದುಬೈನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವವರು ಕರಾವಳಿಯ ಜನರೇ. ನಿಮಗೆ ಉದ್ದಿಮೆ ನಡೆಸುವ ಚಾಕಚಕ್ಯತೆಯಿದೆ. ಅದು ಇಲ್ಲಿ ಬಳಕೆಯಾಗಬೇಕು. ಚುನಾವಣೆ ಸಮಯದಲ್ಲಿ ಮಂಗಳೂರನ್ನು ನಾನು ಡೆಡ್ ಸಿಟಿ ಎಂದಿದ್ದೆ. ಆಗ ಬಿಜೆಪಿ ಶಾಸಕರು ಏಕೆ ಎಂದು ಪ್ರಶ್ನೆ‌ ಮಾಡಿದ್ದರು.‌ ನಾನು ಅದಕ್ಕೆ ಉತ್ತರ ನೀಡಿದ್ದೆ. ಆಗ ಅವರು ಒಪ್ಪಿಕೊಂಡರು. ಆಗ ನಮ್ಮ ಸರ್ಕಾರದ ಯೋಜನೆಗಳ ಅವರಿಗೆ ಹೇಳಿದಾಗ ನಾವು ಸಹ ಬೆಂಬಲ ನೀಡುವುದಾಗಿ ಹೇಳಿದ್ದರು" ಎಂದರು.

ಇದನ್ನೂ ಓದಿ: ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

"ಈ ಭಾಗದಲ್ಲಿ ನಾವು ಇಬ್ಬರು ಶಾಸಕರನ್ನು ಹೊಂದಿರಬಹುದು ಆದರೆ ನಮಗೆ ಸಮಗ್ರ ಕರ್ನಾಟಕದ ಅಭಿವೃದ್ಧಿ ಮುಖ್ಯ. ಪಕ್ಷಾತೀತವಾಗಿ ಸಂಸದರು ಭಾಗವಹಿಸಿ ಬೆಂಬಲ ನೀಡಿದ್ದಾರೆ" ಎಂದರು.

ವರದಿ: ಪ್ರಭಾಕರ ಆರ್

Admin

Admin

Pravasi Prapancha – A pioneering initiative led by Vishweshwar Bhat, the esteemed journalist and head of the Vishwavani Group. It is the first and only travel-focused publication in Kannada journalism, dedicated exclusively to news, information, and travel narratives about various destinations. The digital media counterpart of this venture is Pravasi Prapancha Digital Channel, which brings travel-related news from across the state, country, and world. It features fascinating insights, traveler experiences, interviews related to travel, entertainment segments, and much more. Editor-in-Chief: Shri Vishweshwar Bhat

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

Read Previous

ದೇಶ ಸುತ್ತಬೇಕಿಲ್ಲ, ಕರ್ನಾಟಕದಲ್ಲೇ ಇವೆ ಅನೇಕ ಡಾಲ್ಫಿನ್‌ ತಾಣಗಳು..

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ  ಹೊತ್ತ ಬೆಟ್ಟಗಳ ತವರೂರ..

Read Next

ನೋಡಬನ್ನಿ ರಾಮನಗರ..ಇತಿಹಾಸವನ್ನು ಒಡಲಲ್ಲಿ ಹೊತ್ತ ಬೆಟ್ಟಗಳ ತವರೂರ..