Thursday, June 12, 2025
Thursday, June 12, 2025

ಕರ್ನಾಟಕದ ಪ್ರಮುಖ ದೇವಾಲಯಗಳು: ಇಲ್ಲಿದೆ ಮಾಹಿತಿ!

ಕರ್ನಾಟಕದಲ್ಲಿ ನೂರಾರು ಧಾರ್ಮಿಕ ಸ್ಥಳಗಳಿವೆ. ಪ್ರತಿ ಸ್ಥಳಕ್ಕೂ ಅದರದ್ದೇ ಮಹತ್ವವಿದೆ. ಲಕ್ಷಾಂತರ ಭಕ್ತರು ಈ ಧಾರ್ಮಿಕ ತಾಣಗಳಿಗೆ ಭೇಟಿ ನೀಡುತ್ತಾರೆ. ಅದೆಷ್ಟೋ ಶಕ್ತಿ ದೇವಾನುದೇವತೆಗಳು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಿವೆ.

ಕರ್ನಾಟಕದಲ್ಲಿ ನೂರಾರು ಧಾರ್ಮಿಕ ಸ್ಥಳಗಳಿವೆ. ಪ್ರತಿ ಸ್ಥಳಕ್ಕೂ ಅದರದ್ದೇ ಮಹತ್ವವಿದೆ. ಲಕ್ಷಾಂತರ ಭಕ್ತರು ಈ ಧಾರ್ಮಿಕ ತಾಣಗಳಿಗೆ ಭೇಟಿ ನೀಡುತ್ತಾರೆ. ಅದೆಷ್ಟೋ ಶಕ್ತಿ ದೇವಾನುದೇವತೆಗಳು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಿವೆ. ಈ ಲೇಖನದಲ್ಲಿ ಕರ್ನಾಟಕದ ಪ್ರಮುಖ ಧಾರ್ಮಿಕ ಸ್ಥಳಗಳ ಕುರಿತು ಮಾಹಿತಿ ನೀಡಲಾಗಿದೆ. ಧಾರ್ಮಿಕ ಪ್ರವಾಸದಲ್ಲಿ ಆಸಕ್ತಿಯುಳ್ಳವರು ಈ ತಾಣಗಳಿಗೆ ತಪ್ಪದೇ ಭೇಟಿ ನೀಡಬೇಕು.

ಮುರುಡೇಶ್ವರ
ಮುರುಡೇಶ್ವರವು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ಒಂದು ಪ್ರಸಿದ್ಧ ಧಾರ್ಮಿಕ ಹಾಗೂ ಕೌಟುಂಬಿಕ ಯಾತ್ರಾ ತಾಣವಾಗಿದೆ. ಧ್ಯಾನಸ್ಥ ಸ್ಥಿತಿಯಲ್ಲಿರುವ ಪರಶಿವನು ಭಕ್ತರನ್ನು ಸೆಳೆಯುತ್ತಾನೆ. ಶಿವನ ವಿಗ್ರಹವನ್ನು ನೋಡಿದ ಕೂಡಲೇ ಪ್ರಕ್ಷುಬ್ಧಗೊಂಡ ಮನಸ್ಸು ನಿರಾಳವಾಗುತ್ತದೆ. ಬೆಂಗಳೂರಿನಿಂದ ಮುರುಡೇಶ್ವರ ಸರಿ ಸುಮಾರು 515 ಕಿ.ಮೀ ದೂರವಿದ್ದು ತೆರಳಲು ಬಸ್ಸುಗಳಿವೆ. ಅಲ್ಲದೆ ಮುರುಡೇಶ್ವರದಲ್ಲೂ ರೈಲು ನಿಲ್ದಾಣವಿದ್ದು, ಮಂಗಳೂರು-ಮುಂಬೈ ಕೊಂಕಣ ರೈಲು ಮಾರ್ಗದಲ್ಲಿ ನಿಲುಗಡೆ ಹೊಂದಿದೆ.

ಮುರುಡೇಶ್ವರ


ನಂಜನಗೂಡು
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯವು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ತಾಣ. ಕಾರ್ಕೋಟಕ ವಿಷವನ್ನು ಸೇವಿಸಿ ಲೋಕವನ್ನು ಕಾಪಾಡಿದ ಶಿವನು ಪ್ರಶಾಂತವಾಗಿ ನೆಲೆಸಿ ಭಕ್ತರನ್ನು ಹರಸುತ್ತಿರುವ ಪುಣ್ಯ ಕ್ಷೇತ್ರವಾಗಿದೆ. ಕರ್ನಾಟಕದ ಮೈಸೂರು ಜಿಲ್ಲೆಯಲ್ಲಿರುವ ನಂಜನಗೂಡು ಕಪಿಲಾ ನದಿಯ (ಕಬಿನಿ) ತಟದಲ್ಲಿ ನೆಲೆಸಿರುವ ರಾಜ್ಯದ ಪ್ರಮುಖ ತೀರ್ಥ ಕ್ಷೇತ್ರಗಳ ಪೈಕಿ ಒಂದಾಗಿದೆ. ಈ ಕ್ಷೇತ್ರವು ಮೈಸೂರು ನಗರ ಕೇಂದ್ರದಿಂದ 25 ಕಿ.ಮೀ ದೂರದಲ್ಲಿದೆ. ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಇಲ್ಲಿಗೆ ಭೇಟಿ ನೀಡುತ್ತಾರೆ.

Nanjanagudu

ಶ್ರೀರಂಗನಾಥ ದೇವಾಲಯ
ಮೈಸೂರು ನಗರಕ್ಕೆ ತೀರಾ ಹತ್ತಿರದಲ್ಲಿರುವ ಶ್ರೀರಂಗಪಟ್ಟಣ ಮಂಡ್ಯ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದೆ. ಇಲ್ಲಿ ನೆಲೆ ನಿಂತಿರುವ ಶ್ರೀರಂಗನಾಥ ಸ್ವಾಮಿ ದೇವಾಲಯವು ಜನಪ್ರಿಯತೆ ಗಳಿಸಿದೆ. ಈ ಕ್ಷೇತ್ರಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ದಿನನಿತ್ಯ ಭೇಟಿ ನೀಡುತ್ತಿರುತ್ತಾರೆ. ಸಾಂಸ್ಕೃತಿಕ ನಗರಿ ಮೈಸೂರು ನಗರದಿಂದ ಕೇವಲ 20 ಕಿ.ಮೀ ದೂರದಲ್ಲಿರುವ ಶ್ರೀರಂಗಪಟ್ಟಣವು ರಾಜಧಾನಿ ಬೆಂಗಳೂರಿನಿಂದ 120 ಕಿ.ಮೀನಷ್ಟು ದೂರದಲ್ಲಿದೆ. ಎರಡೂ ನಗರಗಳಿಂದ ಇಲ್ಲಿಗೆ ತೆರಳಲು ರೈಲು ಹಾಗೂ ಬಸ್ಸುಗಳ ಸೌಲಭ್ಯವಿದೆ.

ಶ್ರೀರಂಗಪಟ್ಟಣ


ಕುಕ್ಕೆ ಸುಬ್ರಹ್ಮಣ್ಯ
ಸರ್ಪ ದೋಷ ಸಮಸ್ಯೆಗೆ ಪರಿಹಾರ ನೀಡಲೆಂದೇ ಕರ್ನಾಟಕದಲ್ಲಿ ಪ್ರಸಿದ್ಧ ಪುಣ್ಯಕ್ಷೇತ್ರವಿದೆ. ಕ್ಷೇತ್ರದ ಹೆಸರು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಈ ದೇವಸ್ಥಾನವು ಮಂಗಳೂರು ಜಿಲ್ಲೆಯ ಅತಿ ಮುಖ್ಯ ದೇವಾಲಯವೂ ಸಹ ಆಗಿದೆ. ಕುಕ್ಕೆಯು ಶ್ರೀಕ್ಷೇತ್ರ ಧರ್ಮಸ್ಥಳದಿಂದ ಸರಿ ಸುಮಾರು 57 ಕಿ.ಮೀ ದೂರದಲ್ಲಿದ್ದು, ಅಲ್ಲಿಗೆ ಭೇಟಿ ನೀಡುವ ಭಕ್ತರು ತಪ್ಪದೇ ಇಲ್ಲಿಗೆ ಬರುತ್ತಾರೆ. ಅಲ್ಲಿನ ನಾಗಬನ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತದೆ ಎಂಬ ನಂಬಿಕೆಯಿದೆ.

ಕುಕ್ಕೆ


ಧರ್ಮಸ್ಥಳ
ಶ್ರೀಕ್ಷೇತ್ರ ಧರ್ಮಸ್ಥಳವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪ್ರಸಿದ್ಧ ಧಾರ್ಮಿಕ ತಾಣವಾಗಿದೆ. ಧರ್ಮಸ್ಥಳವು ಶ್ರೀ ಮಂಜುನಾಥಸ್ವಾಮಿ ದೇವಾಲಯದಿಮದಲೇ ಖ್ಯಾತಿ ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರವಾಗಿ ಲಕ್ಷಾಂತರ ಭಕ್ತರನ್ನು ಸೆಳೆಯುತ್ತಿದೆ. ಧರ್ಮಸ್ಥಳದ ಸುತ್ತಮುತ್ತಲೂ ಹತ್ತಾರು ಕ್ಷೇತ್ರಗಳಿವೆ. ಶ್ರವಣಬೆಳಗೊಳದಲ್ಲಿರುವಂತೆ ಎತ್ತರದ ಬಾಹುಬಲಿಯ ಪ್ರತಿಮೆಯೂ ಕೂಡ ಧರ್ಮಸ್ಥಳದಲ್ಲಿದೆ. ನೇತ್ರಾವತಿ ನದಿ, ಶ್ರೀರಾಮ ದೇವಾಲಯ, ಸೌತಡ್ಕ ಗಣಪತಿ, ಚಂದ್ರಬಸದಿ ದೇವಾಲಯ, ಸುರ್ಯ ದೆವಾಲಯ ಇಲ್ಲಿನ ಪ್ರಮುಖ ಧಾರ್ಮಿಕ ಕೇಂದ್ರ.

ಧರ್ಮಸ್ಥಳ

ಕೂಡಲಸಂಗಮ
ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲಿರುವ ಕೂಡಲಸಂಗಮವು ತೀರ್ಥ ಕ್ಷೇತ್ರವಾಗಿ ಪ್ರಸಿದ್ಧಿ ಪಡೆದಿದೆ. ಇದು ಭಕ್ತಿ ಭಂಡಾರಿ ಶ್ರೀ ಬಸವೇಶ್ವರ ಐಕ್ಯಗೊಂಡ ಪುಣ್ಯ ಸ್ಥಳವಾಗಿದೆ. ಮತ್ತೊಂದು ಪ್ರವಾಸಿ ತಾಣವಾದ ಆಲಮಟ್ಟಿ ಆಣೆಕಟ್ಟಿನಿಂದ ಸುಮಾರು 15 ಕಿ.ಮೀ ದೂರವಿರುವ ಕೂಡಲಸಂಗಮವು ಕೃಷ್ಣಾ ಹಾಗೂ ಮಲಪ್ರಭಾ ನದಿಗಳ ಸಂಗಮದ ಸ್ಥಳವಾಗಿದೆ. ಈ ಸಂಗಮದ ನದಿಯು ಆಂಧ್ರದ ಪುಣ್ಯ ಕ್ಷೇತ್ರವಾದ ಶ್ರೀಶೈಲಂ ಕಡೆಗೆ ಹರಿಯುತ್ತದೆ. ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳುವವರು ಈ ಧಾರ್ಮಿಕ ತಾಣಕ್ಕೆ ತಪ್ಪದೇ ಭೇಟಿ ನೀಡಬೇಕು.

ಕೂಡಲಸಂಗಮ

Deekshith Nair

Deekshith Nair

Travel blogger and adventurer passionate about exploring new cultures and sharing travel experiences.

ಕೃಷ್ಣ-ಸುಧಾಮರ ಸ್ನೇಹದ ಗುರುತು ಬೇಟ್ ದ್ವಾರಕಾ

Read Previous

ಕೃಷ್ಣ-ಸುಧಾಮರ ಸ್ನೇಹದ ಗುರುತು ಬೇಟ್ ದ್ವಾರಕಾ

ವ್ಹಾವ್..ವ್ಹಾವ್..ಗೋವಾ!

Read Next

ವ್ಹಾವ್..ವ್ಹಾವ್..ಗೋವಾ!